Thursday, 19 April 2018

ಅಧ್ಯಾಯ – 01 : ಶ್ಲೋಕ – 42



ಸಂಕರೋ ನರಕಾಯೈವ ಕುಲಘ್ನಾನಾಂ ಕುಲಸ್ಯ ಚ     ।

ಪತಂತಿ  ಪಿತರೋ ಹ್ಯೇಷಾಂ ಲುಪ್ತಪಿಂಡೋದಕಕ್ರಿಯಾಃ     ॥೪೨॥

ಸಂಕರಃ ನರಕಾಯ ಏವ  ಕುಲಘ್ನಾನಾಮ್  ಕುಲಸ್ಯ ಚ
ಪತಂತಿ  ಪಿತರಃ ಹಿ ಏಷಾಮ್  ಲುಪ್ತ ಪಿಂಡ ಉದಕ ಕ್ರಿಯಾಃ -ಬಣ್ಣಗೇಡು ಕುಲಗೇಡಿಗಳನ್ನೂ, ಕುಲವನ್ನೂ ನರಕಕ್ಕೆ ತಳ್ಳುತ್ತದೆ. ಇಂಥವರ ಪೂರ್ವಜರು ಪಿಂಡ-ತರ್ಪಣಗಳಿಲ್ಲದೆ ನರಳುತ್ತಾರೆ.

ವಿಕ್ಷಿಪ್ತ ಮನಸ್ಸಿನ ಮಕ್ಕಳು ಹುಟ್ಟುವುದರಿಂದ, ಇಡೀ ಸಮಾಜ ನರಕಕ್ಕೆ ಹೋಗಬೇಕಾಗುತ್ತದೆ. ಹಾಗು ಅದಕ್ಕೆ ಕಾರಣರಾದ ನಾವೂ ಕೂಡಾ ನರಕಕ್ಕೆ ಹೋಗಬೇಕಾಗುತ್ತದೆ. ಸಮಾಜ ಈ ರೀತಿ ಸಂಕೀರ್ಣವಾದಾಗ, ಎಲ್ಲಾ ನಂಬಿಕಯನ್ನು ಕಳೆದುಕೊಂಡಾಗ, ಪಿತೃಗಳು ಪಿಂಡ ಇಲ್ಲದೆ ನರಕದಲ್ಲಿ ಬೀಳುತ್ತಾರೆ ಎನ್ನುವುದು ಅರ್ಜುನನ ಯುದ್ಧೋತ್ತರ ಪರಿಣಾಮದ ಭೀಕರತೆಯ ಪರಿಕಲ್ಪನೆ.

ಇಲ್ಲಿ ಪಿಂಡ ಅಂದರೆ ಏನು? ಅದರ ಮಹತ್ವ ಏನು? ಅದು ಯಾರಿಗೆ ಹೋಗಿ ಹೇಗೆ ಸೇರುತ್ತದೆ ಎನ್ನುವುದನ್ನು ನಾವು ಅರ್ಥ  ಮಾಡಿಕೊಳ್ಳೋಣ.  ನಾವು ಹಾಕುವ ಸ್ಥೂಲವಾದ ಪಿಂಡ ಸತ್ತ ಜೀವಕ್ಕೆ ನೇರವಾಗಿ ಹೋಗಿ ಸೇರುವುದಿಲ್ಲ. ಸತ್ತ ನಂತರ ಸ್ಥೂಲ ಜೀವದಲ್ಲಿ ಇರುವ ಜೀವಕ್ಕೆ ಸ್ಥೂಲವಾದ ಪಿಂಡ ಬೇಕಿಲ್ಲ. ಜೀವ ತನ್ನ ಕರ್ಮಾನುಸಾರ ತಾನು ಹೋಗಬೇಕಾದಲ್ಲಿಗೆ ಹೋಗುತ್ತದೆ. ನಾವು ಪಿಂಡ ಹಾಕುವುದು ಪಿತೃದೇವತೆಗಳಿಗೆ. ಇದೊಂದು ದೇವತಾಗಣ. ಅದರಲ್ಲಿ ಒಟ್ಟು ನೂರು ದೇವತೆಗಳು. ಅವರಲ್ಲಿ  ಮೂರು ಪ್ರಧಾನ`ಪಿತೃಗಳು .

ಜೀವಿತ ಕಾಲದಲ್ಲಿ ತತ್ವಾಭಿಮಾನಿ ದೇವತೆಗಳನ್ನು ಹೇಗೆ  ಪೂಜಿಸುತ್ತೆವೋ ಹಾಗೆ ಸತ್ತ ನಂತರ, ಈ ಸ್ಥೂಲಶರೀರದಿಂದ ಈಚೆ ಬಂದ ಮೇಲೆ, ಜೀವವನ್ನು ರಕ್ಷಿಸುವ ದೇವತಾಗಣ-ಪಿತೃಗಣ. ಈ ಪಿತೃಗಳನ್ನು ನಿಯಂತ್ರಿಸುವವರು ವಸು-ರುದ್ರ-ಆದಿತ್ಯರು. ಈ ಪಿತೃ ದೇವತೆಗಳನ್ನು ನಮ್ಮ ಪೂರ್ವಜರು ತೀರಿಕೊಂಡ ದಿನದಂದು ಆರಾಧಿಸುವುದು ಸಂಪ್ರದಾಯ. ಇಲ್ಲಿ ಪಿತೃಗಳಿಗೆ ಪಿಂಡ ಪ್ರಧಾನ ಮಾಡುವ ಕಾರಣ ಏನೆಂದರೆ, ಒಂದು ವೇಳೆ ಕಾರಣ ವಿಶೇಷದಿಂದ ನಮ್ಮ ಹಿರಿಯರಿಗೆ ಅವರ ದಾರಿಯಲ್ಲಿ  ಬಾಧಕವಾಗಿದ್ದರೆ, ಅದನ್ನು ಪರಿಹರಿಸಿ ಎನ್ನುವ ಪ್ರಾರ್ಥನೆಯೇ ಪಿಂಡ ಪ್ರಧಾನ. “ಪ್ರಾರಾಬ್ದ ಕರ್ಮದಿಂದ ಅವರನ್ನು ಕಾಪಾಡಿ” ಎನ್ನುವ ಪಿತೃ-ದೇವತೆಗಳ ಪೂಜೆ. ಇನ್ನು ಕಾಗೆ ಮುಟ್ಟುವುದು ಎಂದರೆ ಪಿತೃ ದೇವತೆಗಳು ನಮ್ಮ ಪೂಜೆಯನ್ನು ಸ್ವೀಕರಿಸಿದ ಶಕುನ ಸಂಕೇತ.
ಕೃಪೆ ; ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯರು

ಅಧ್ಯಾಯ – 01 : ಶ್ಲೋಕ – 43



ದೋಷೈರೇತೈಃ ಕುಲಘ್ನಾನಾಂ ವರ್ಣಸಂಕರಕಾರಕೈಃ    ।

ಉತ್ಸಾದ್ಯನ್ತೇ ಜಾತಿಧರ್ಮಾಃ ಕುಲಧರ್ಮಾಶ್ಚ ಶಾಶ್ವತಾಃ   ॥೪೩॥

ದೋಷೈ ಏತೈಃ ಕುಲಘ್ನಾನಾಮ್  ವರ್ಣಸಂಕರ ಕಾರಕೈಃ   
ಉತ್ಸಾದ್ಯನ್ತೇ ಜಾತಿಧರ್ಮಾಃ ಕುಲಧರ್ಮಾಃ ಚ  ಶಾಶ್ವತಾಃ -ಸಮಾಜದ  ಬಣ್ಣಗೇಡಿಗೆ ಕಾರಣರಾದ ಕುಲಗೇಡಿಗಳ ಇಂಥ ತಪ್ಪುಗಳಿಂದ ಸಹಜ ಧರ್ಮಗಳು ಮತ್ತು ಅಳಿವಿರದ ಕುಲಧರ್ಮಗಳು ನೆಲೆಗೆಡುತ್ತವೆ.

ಯುದ್ಧದಿಂದ ಸಮಾಜದ ಮೇಲೆ ಆಗುವ ನೇರ ಪರಿಣಾಮ ಎಂದರೆ, ನಾಯಕರಿಲ್ಲದ, ಯುವಕರಿಲ್ಲದ ಸಮಾಜ.  ಗಂಡು-ಹೆಣ್ಣಿನ ಅನುಪಾತ ವೆತ್ಯಾಸ. ಇದು ಸರಿ ಹೊಂದಬೇಕಾದರೆ ಅದೆಷ್ಟು ವರ್ಷಗಳು ಬೇಕು? ನಾವು ಮಹಾಭಾರತ ಯುದ್ಧವನ್ನು ನೋಡಿದರೆ ಅಲ್ಲಿ ಕನಿಷ್ಠ ಐವತ್ತು ಲಕ್ಷ ಮಂದಿ ಜನ ಸತ್ತಿದ್ದಾರೆ. ಇಂತಹ ಮಹಾಯುದ್ಧದಿಂದ ಇಡೀ ಸಮಾಜ ನಾಶಮಾಡಿದ ಕುಲಕಂಟಕರು ನಾವಾಗುತ್ತೇವೆ ಎನ್ನುವುದು ಅರ್ಜುನನ ಕಳಕಳಿ. “ಸಮಾಜದ ವ್ಯವಸ್ಥೆ  ನಾಶವಾಗುವುದರಿಂದ ಸ್ವಭಾವ ನಾಶವಾಗುತ್ತದೆ. ಇದರಿಂದ ಆಯಾ ಜೀವದ ಸ್ವಭಾವದ ಅಭಿವೃದ್ಧಿ ಆಗದೆ, ವ್ಯಕ್ತಿತ್ವ ವಿಕಸನ ನಾಶವಾಗುತ್ತದೆ. ಶಾಶ್ವತ ಮೌಲ್ಯದ ಸಮಾಜಧರ್ಮ ನಾಶವಾಗುತ್ತದೆ. ಅನಾದಿ ಕಾಲದಿಂದ ಸಮಾಜ ಒಪ್ಪಿಕೊಂಡು ಬಂದ ಸ್ಥಿರಧರ್ಮ ಕೊಚ್ಚಿಕೊಂಡು ಹೋಗುತ್ತದೆ” ಎಂದು ಅರ್ಜುನ ಕೃಷ್ಣನ ಮುಂದೆ ತನ್ನ ವಾದವನ್ನು ಮಂಡಿಸುತ್ತಾನೆ.
ಕೃಪೆ ; ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯರು

ಅಧ್ಯಾಯ - 04 : ಶ್ಲೋಕ – 22



ಯದೃಚ್ಛಾಲಾಭಸಂತುಷ್ಟೋ ದ್ವಂದ್ವಾತೀತೋ ವಿಮತ್ಸರಃ ।ಸಮಃ ಸಿದ್ಧಾವಸಿದ್ಧೌ ಚ ಕೃತ್ವಾSಪಿ ನ ನಿಬದ್ಧ್ಯತೇ ॥೨೨॥

ಯದೃಚ್ಛಾ ಲಾಭ ಸಂತುಷ್ಟಃ  ದ್ವಂದ್ವ ಅತೀತಃ ವಿಮತ್ಸರಃ |
ಸಮಃ ಸಿದ್ಧೌ ಅಸಿದ್ಧೌ ಚ ಕೃತ್ವಾ ಅಪಿ ನ ನಿಬಧ್ಯತೇ --

ತಾನಾಗಿಯೇ ಸಿಕ್ಕಿದ್ದರಲ್ಲಿ ಸಂತಸಪಡುವವನು, ಬದುಕಿನಇಬ್ಬಂದಿತನವನ್ನು ಮೀರಿನಿಂತವನು, ಹೆರವರ ಏಳಿಗೆಗೆ ಕಿಚ್ಚುಪಡದವನು,ಗಳಿಕೆಯನ್ನೂ ಕಲಿಕೆಯನ್ನೂ ಒಂದೇ ಬಗೆಯಿಂದಕಾಣುವವನು ಕರ್ಮ ಮಾಡಿದರೂ ಅದರ ಸೆರೆಗೆ ಸಿಕ್ಕುವುದಿಲ್ಲ.

ನಮ್ಮ ಮನಸ್ಸು ನಮ್ಮ ಹಿಡಿತದಲ್ಲಿ ಬಂದಾಗ ಕಾಣುವ ಮುಖ್ಯ ಲಕ್ಷಣದ ಬಗ್ಗೆ ಇಲ್ಲಿ ವಿವರಣೆ ಇದೆ.  ತೃಪ್ತಿಯನ್ನುಸಾಧಿಸಿದವನಿಗೆ ಏನಾದರೂ ಸಿಕ್ಕಿದರೆ ಅದರಲ್ಲೇ ಸಂತೋಷವಾಗಿರುತ್ತಾನೆ. ಸಿಕ್ಕಿದ್ದು ಸಾಲದೆಂದಾಗಲಿ, ಇನ್ನೇನೋ ಸಿಗಲಿಎಂದಾಗಲಿ ಆತನ ಮನಸ್ಸು ಬಯಸುವುದಿಲ್ಲ. ಏಕೆಂದರೆ ನಮಗೆ ಏನೇ ಸಿಕ್ಕಿದರೂ ಅದು ಭಗವಂತನ ಇಚ್ಛೆಯಿಂದಸಿಕ್ಕಿರುವುದು. ಉದಾಹರಣೆಗೆ ಉದ್ಯೋಗ. ಪ್ರತಿಭೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವುದಿಲ್ಲ. ಉದ್ಯೋಗಸಿಗುವುದು, ಅದರಿಂದ ಸಂಬಳ ಸಿಗುವುದು- ಎಲ್ಲವೂ ಭಗವಂತನ ಇಚ್ಛೆಯಂತೆ. ಆದ್ದರಿಂದ ಎಲ್ಲವೂ ಭಗವಂತನ ಸಂಕಲ್ಪಎಂದು ತಿಳಿದು ನಿಸ್ವಾರ್ಥ ಕರ್ಮದಲ್ಲಿ ತೊಡಗಿದಾಗ ಮನಸ್ಸು ನಿರ್ಮಲವಾಗುತ್ತದೆ. ಈ ಸ್ಥಿತಿಯಲ್ಲಿ ಅಹಂಕಾರ ಎಂದೂ ಹತ್ತಿರಸುಳಿಯುವುದಿಲ್ಲ. ಬಡತನವಾಗಲಿ,ಸಿರಿತನವಾಗಲಿ, ನಾವು ಹುಟ್ಟುವ ಮನೆಯಾಗಲಿ, ಯಾವುದೂ ನಮ್ಮ ಕೈಯಲ್ಲಿಲ್ಲ. ಎಲ್ಲವೂ ಆ ಈಶ್ವರ ಇಚ್ಛೆ. ಇದನ್ನು  ತಿಳಿದು ಬದುಕುವುದು ಯತಚಿತ್ತಾತ್ಮನ ಗುರುತು.

ಇನ್ನು ಎರಡನೆ ಲಕ್ಷಣ 'ದ್ವಂದ್ವಾತೀತ ಜೀವನ'. ನಮ್ಮ ಜೀವನ ಎಂದರೆ ದ್ವಂದ್ವ. ಹಗಲು-ರಾತ್ರಿ, ಲಾಭ-ನಷ್ಟ, ಸೋಲು-ಗೆಲುವು, ಹುಟ್ಟು-ಸಾವು ಹೀಗೆ ಎಲ್ಲವೂ ದ್ವಂದ್ವ. ನಾವು ಈ ದ್ವಂದ್ವದ ನಡುವೆಯೇ ಬದುಕಬೇಕು. ಹಗಲು-ರಾತ್ರಿಗೆ ನಾವುಹೇಗೆ ಹೊಂದಿಕೊಂಡು ಬದುಕುತ್ತೇವೆ ಹಾಗೆ 'ಇತರ ದ್ವಂದ್ವದ ಆಘಾತಕ್ಕೆ ಒಳಗಾಗದೆ ಬದುಕಲು ಕಲಿ'  ಎನ್ನುತ್ತಾನೆ ಕೃಷ್ಣ. ಸಿಗದಿದ್ದಾಗ ದುಃಖವಿಲ್ಲ, ಸಿಕ್ಕಾಗ ಹಾರಾಟವಿಲ್ಲ. ಎರಡೂ ಸ್ಥಿತಿಯಲ್ಲಿ ಏಕರೂಪವಾದ ಮನಃಸ್ಥಿತಿಯನ್ನು ಗಳಿಸುವುದುದ್ವಂದ್ವಾತೀತ ಜೀವನ.

ದ್ವಂದ್ವಾತೀತನಾಗಿ ಬದುಕುವಾಗ ಒಂದು  ಸಮಸ್ಯೆ ಎದುರಾಗುತ್ತದೆ. ಇದ್ದದ್ದು ಸಾಕು ಎಂದು ಬದುಕುತ್ತಿರುವಾಗ ನಮ್ಮಜೊತೆಗಿನ ಇನ್ನೊಬ್ಬ ಹೆಚ್ಚು ಗಳಿಸಲಾರಂಬಿಸಿದರೆ, ಅದನ್ನು ನೋಡಿ ನಮಗೆ ಕಿಚ್ಚು ಹುಟ್ಟಿಕೊಳ್ಳುತ್ತದೆ. ನಮ್ಮ ಕೆಳಗಿನಮಟ್ಟದವರು, ನಮ್ಮ ಪಕ್ಕದ ಮನೆಯವರು  ಯಾವುದೋ ಕಾರಣಕ್ಕೆ ಶ್ರೀಮಂತರಾದರೆ ನಮಗೆ ಸಂಕಟ! ಇಲ್ಲಿ ಕೃಷ್ಣಹೇಳುತ್ತಾನೆ "ಇನ್ನೊಬ್ಬರನ್ನು ಕಂಡು ಎಂದೂ ಕಿಚ್ಚು ಪಡಬೇಡ" ಎಂದು. ಯಾರ್ಯಾರಿಗೆ ಎಷ್ಟೆಷ್ಟು ಸಿಗಬೇಕೋ ಅಷ್ಟಷ್ಟೇಸಿಗುವುದು. ನಾವು ಎಷ್ಟು ಕೌಶಲ್ಯ(expertise)ರಾದರೂ ಕೂಡಾ ಭಗವಂತ ಅನುಗ್ರಹಿಸದೇ ಇದ್ದರೆ ನಾವು ಮೇಲಕ್ಕೇಳಲುಸಾಧ್ಯವಿಲ್ಲ. ಈ ಎಚ್ಚರವೇ  "ಯದೃಚ್ಛಾ ಲಾಭ ಸಂತುಷ್ಟಃ"

ಇನ್ನು ಸಿದ್ಧಿ ಅಸಿದ್ಧಿಗಳು. ಉದಾಹರಣೆಗೆ ಧ್ಯಾನ(Meditation): ಧ್ಯಾನದಲ್ಲಿ ಏಕಾಗ್ರತೆ ಪಡೆಯಲು ಆಗದೆ ಇನ್ನೇನೋಕಾಣಿಸಿದರೆ ಏನು ಕಾಣಿಸಿತೋ ಅದರಲ್ಲೇ ಭಗವಂತನನ್ನು ಕಾಣು. ಅದಕ್ಕಾಗಿ ತಲೆ ಕೆಡಿಸಿಕೊಳ್ಳಬೇಡ. ಏಕಾಗ್ರತೆಸಾಧ್ಯವಾದರೆ ಭ್ರಮೆಗೊಳಗಾಗಬೇಡ. ಏಕೆಂದರೆ ಸಿದ್ಧಿ-ಅಸಿದ್ಧಿಗಳು ನಮ್ಮ ಕೈಯಲ್ಲಿಲ್ಲ. ಅಸಿದ್ಧಿಯೂ ಸಿದ್ಧಿಯ ಮೆಟ್ಟಿಲು. ಇಂತಹ ಮಾನಸಿಕ ಸಮತೋಲನ ಲೌಕಿಕ ಮತ್ತು ಅಧ್ಯಾತ್ಮಿಕ ಜೀವನದಲ್ಲಿ ಅತಿಮುಖ್ಯ. ಇಂತಹ ಸ್ಥಿತಿಯಲ್ಲಿ ಕರ್ಮ ಎಂದೂಬಂಧಕವಾಗುವುದಿಲ್ಲ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ಅಧ್ಯಾಯ - 04 : ಶ್ಲೋಕ – 23



ಗತ ಸಂಗಸ್ಯ ಮುಕ್ತಸ್ಯ ಜ್ಞಾನಾವಸ್ಥಿತಚೇತಸಃ ।ಯಜ್ಞಾಯಾSಚರತಃ ಕರ್ಮ ಸಮಗ್ರಂ ಪ್ರವಿಲೀಯತೇ ॥೨೩॥

ಗತ ಸಂಗಸ್ಯ ಮುಕ್ತಸ್ಯ ಜ್ಞಾನ ಅವಸ್ಥಿತ ಚೇತಸಃ |
ಯಜ್ಞಾಯ ಆಚರತಃ ಕರ್ಮ ಸಮಗ್ರಮ್  ಪ್ರವಿಲೀಯತೇ -

ಫಲದ ನಂಟು ತೊರೆದು, ದೇಹಾಭಿಮಾನ ತೊರೆದು, ಭಗವಂತನಅರಿವಿನಲ್ಲೆ ಬಗೆನೆಟ್ಟು, ಪೂಜೆಯೆಂದು ಮಾಡುವವನ ಎಲ್ಲಾ ಕರ್ಮ ಲಯಗೊಳ್ಳುತ್ತದೆ.

ಈ ಶ್ಲೋಕದಲ್ಲಿ ಮೇಲೆ ಹೇಳಿದ ಎಲ್ಲಾ ವಿಷಯವನ್ನು ಉಪಸಂಹಾರ ರೂಪದಲ್ಲಿ ಭಗವಂತ ನಮ್ಮ ಮುಂದಿಟ್ಟಿದ್ದಾನೆ.
ಫಲದ ಬಗ್ಗೆ ಅತಿಯಾದ ಆಸೆ ಇಟ್ಟುಕೊಳ್ಳಬೇಡ; ಅತಿಯಾದ ನಿರೀಕ್ಷೆ ಬೇಡ; ಕರ್ತವ್ಯ ನಿಷ್ಠೆಇರಲಿ; ದೇಹಾಭಿಮಾನ, ಪರಿವಾರದ ಅಭಿಮಾನವನ್ನು ತೊರೆದು ನಿರ್ಲಿಪ್ತನಾಗಿ ಬದುಕಲು ಕಲಿ;ಮನಸ್ಸನ್ನುಜ್ಞಾನಸ್ವರೂಪನಾದ ಭಗವಂತ(ಚೇತಸ್ಸು)ನಲ್ಲಿ ನೆಲೆಗೊಳಿಸು. ಹೀಗೆ ಬದುಕಿದಾಗ ನಾವು ಮಾಡುವ ಕರ್ಮವೆಲ್ಲವೂಯಜ್ಞವಾಗಿ ಯಜ್ಞ ನಾಮಕ ಭಗವಂತನನ್ನು ಸೇರುತ್ತದೆ ಹಾಗು  ಜ್ಞಾನದ ಬೆಂಕಿಯಲ್ಲಿ ಕರ್ಮದ ಕೊಳೆ ಸುಟ್ಟುಹೋಗುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ಅಧ್ಯಾಯ – 01 : ಶ್ಲೋಕ – 44



ಉತ್ಸನ್ನಕುಲಧರ್ಮಾಣಾಂ ಮನುಷ್ಯಾಣಾಂ ಜನಾರ್ದನ  ।

ನರಕೇ ನಿಯತಂ ವಾಸೋ ಭವತೀತ್ಯನುಶುಶ್ರುಮ  ॥೪೪॥

ಉತ್ಸನ್ನ ಕುಲಧರ್ಮಾಣಾಮ್ ಮನುಷ್ಯಾಣಾಮ್  ಜನಾರ್ದನ 
ನರಕೇ ನಿಯತಮ್  ವಾಸಃ ಭವತಿ ಇತಿ ಅನುಶುಶ್ರುಮ- ಓ ಜನಾರ್ಧನ, ಕುಲ ಧರ್ಮದ ನೆಲೆದಪ್ಪಿದವರಿಗೆ ನರಕವೇ ಮುಗಿಯದ ನೆಲೆ ಎಂದು ಕೇಳಿ ಬಲ್ಲೆವು.

ಇಹದಲ್ಲೂ ನರಕ, ಪರದಲ್ಲೂ ನರಕ, ಹೀಗೆ ಜನ್ಮವೆಲ್ಲಾ ನರಕದಲ್ಲಿ. ಎಂದೆಂದೂ ನರಕದಲ್ಲೇ ಕೊಳೆಯುವ ಪರಿಸ್ಥಿತಿ ಬರುತ್ತದೆ ಎಂದು ತಿಳಿದವರು ಹೇಳುವುದನ್ನು ಕೇಳಿ ತಿಳಿದಿದ್ದೇನೆ. ಹೀಗೆ ಇಹವೂ ನರಕ, ಪರವೂ ನರಕವಾಗಲು ನಾವೇ ಕಾರಣವಾಗುತ್ತೇವೆ.
ಕೃಪೆ ; ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯರು